
ಮಳೆಗಾಲ ಶುರುವಾದರೆ
ಬರೀ ಮೋಡದ ಮುಸುಕು
ಚಾದರ ಹೊದ್ದು ಮಲಗಿದರೆ
ಏಳಲು ಒಪ್ಪುವುದಿಲ್ಲ ಮನಸು
ಮೋಡದ ಪೊರೆ ಸರಿದಾಗ
ಮಬ್ಬುಗತ್ತಲಿನ ಬೆಳಕು ಹೊರಗೆ
ಸರಿಸಲಾಗದ ಪೊರೆಯ
ಕತ್ತಲಿನ ಥಳಕು ಸದಾ ನನ್ನೊಳಗೆ
ಮನೆಯಂಗಳದ ಹೊಳೆಯಲ್ಲಿ
ಮನದಂಗಳದ ಪ್ರವಾಹಕ್ಕೆ ಬೆಲೆಯಿಲ್ಲ
ಅವಳಿಗಾಗಿ ಅತ್ತರೆ ಪ್ರಯೋಜನವೂ ಇಲ್ಲ
ಅಳದಿರಲು ಅದ್ಯಾಕೋ ಹೃದಯ ಒಪ್ಪುತ್ತಿಲ್ಲ!
ದೂರ್ವಾಸರ ಶಾಪ ಶಕುಂತಲೆಗಲ್ಲ
ದುಶ್ಯಂತನಿಗೆ ಎಂದು ಅರ್ಥವಾಗದ ಕವಿ
ತನಗೆ ತೋಚಿದ್ದನ್ನೇ ಗೀಚಿಬಿಟ್ಟಿದ್ದಾನಲ್ಲ
ಎಂದಾಗ ಸಿಟ್ಟಾಗಿದ್ದ ಮೋಡದೊಳಗಣ ರವಿ!
5 responses so far ↓
Roopa // June 22, 2009 at 11:44 am
manataTTuva kavite.
kavya gowda // June 23, 2009 at 11:25 am
ದೂರ್ವಾಸರ ಶಾಪ ಶಕುಂತಲೆಗಲ್ಲ ದುಶ್ಯಂತನಿಗೆ…. thumba istavaaythu
ಅವಳಿಗಾಗಿ ಅತ್ತರೆ ಪ್ರಯೋಜನವೂ ಇಲ್ಲ
ಅಳದಿರಲು ಅದ್ಯಾಕೋ ಹೃದಯ ಒಪ್ಪುತ್ತಿಲ್ಲ…….(baaravaada hrudaya)
thumba chennagide
prasad // June 23, 2009 at 1:48 pm
“ದೂರ್ವಾಸರ ಶಾಪ ಶಕುಂತಲೆಗಲ್ಲ
ದುಶ್ಯಂತನಿಗೆ ಎಂದು ಅರ್ಥವಾಗದ ಕವಿ
ತನಗೆ ತೋಚಿದ್ದನ್ನೇ ಗೀಚಿಬಿಟ್ಟಿದ್ದಾನಲ್ಲ” nijavaagirabhude yochisuttiddene.. gandigu hrudayvembudu untalla
aksharavihaara // June 25, 2009 at 6:19 am
ಪ್ರತಿಕ್ರಿಯೆಗೆ ಧನ್ಯವಾದಗಳು…
Raghavendra K T // June 27, 2009 at 5:57 pm
baala chenagiddu..